ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಅಕ್ಟೋಬರ್ ೨ರಂದು ಯುಗಪುರುಷ ಕಿನ್ನಿಗೋಳಿ ಹಾಗೂ ವಿಜಯಾ ಕಲಾವಿದರು ಕಿನ್ನಿಗೋಳಿ ಕೊಡಮಾಡಿದ ಕೆ.ಜೆ.ಶೆಟ್ಟಿ ಕಡಂದಲೆ ಪ್ರಶಸ್ತಿ ಪ್ರದಾನ ಸಮಾರಂಭವು ಜರಗಿತು. ಪತ್ರಕರ್ತ ಸ್ಟೀವನ್ ರೇಗೋರವರಿಗೆ ಮಂಗಳೂರಿನ ಸಂದೇಶ ಪ್ರತಿಷ್ಠಾನದ ನಿರ್ದೇಶಕ ರೆ|ಫಾ| ವಲೇರಿಯನ್ ಮೆಂಡೋನ್ಸಾರವರು ಪ್ರಶಸ್ತಿ ಪ್ರದಾನ ಮಾಡಿದರು. ಹರಿಕೃಷ್ಣ ಪುನರೂರುರವರು ಅಧ್ಯಕ್ಷತೆ ವಹಿಸಿದ್ದರು.ಕಟೀಲಿನ ಶ್ರೀ ಕೆ.ಲಕ್ಷ್ಮೀನಾರಾಯಣ ಆಸ್ರಣ್ಣರು ಆಶೀರ್ವಚನ ನೀಡಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ಕಿರಣ್ ಮಂಜನಬೈಲು, ರೋಟರಿಯ ಶ್ರೀ ಪಿ.ಸತೀಶ್ ರಾವ್, ಸುರಗಿರಿ ವಾಸು ಶೆಟ್ಟಿ, ಜಗದೀಶ ಶೆಟ್ಟಿ ಕೆಂಚನಕೆರೆ, ಸಾಲೆತ್ತೂರು ಜಯರಾಮ ಶೆಟ್ಟಿ, ಸಾಯಿನಾಥ ಶೆಟ್ಟಿ, ಶ್ರೀ ತಾರಾನಾಥ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯುಗಪುರುಷದ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ ಸ್ವಾಗತಿಸಿದರು. ವಿಜಯಾಕಲಾವಿದರ ಅಧ್ಯಕ್ಷ ಶರತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ನರೇಂದ್ರ ಕೆರೆಕಾಡು ಪ್ರಶಸ್ತಿ ಪತ್ರ ವಾಚಿಸಿದರು. ಲಕ್ಷ್ಮಣ್ ಬಿ.ಬಿ. ವಂದಿಸಿದರು.
nice...........
ReplyDelete