Saturday, 25 February 2012

ಏಳಿಂಜೆ ಕೋಂಜಾಲು ಗುತ್ತುವಿನಲ್ಲಿ ನಾಗಮಂಡಲೋತ್ಸವ ಧಾರ್ಮಿಕ ಸಭೆ


 ಏಳಿಂಜೆ ಕೋಂಜಾಲು ಗುತ್ತು ಕುಟುಂಬಿಕರು ಆರಾಧಿಸಿಕೊಂಡು ಬಂದಿರುವ ನಾಗಬನದಲ್ಲಿ ಅಷ್ಠಪವಿತ್ರ ನಾಗಮಂಡಲೋತ್ಸವ ಶುಕ್ರವಾರ ನಡೆಯಿತು. ಏಳಿಂಜೆ ಗಣೇಶ ಭಟ್‌ರ ಪೌರೋಹಿತ್ಯದಲ್ಲಿ ಸಗ್ರಿ ಗೋಪಾಲಕೃಷ್ಣ ಸಾಮಗ, ಮದ್ದೂರು ಕೃಷ್ಣಪ್ರಸಾದ್ ವೈದ್ಯ ಮತ್ತು ಬಳಗದವರ ಸಹಯೋಗದಲ್ಲಿ ನಾಗಮಂಡಲೋತ್ಸವ ನಡೆಯಿತು
.


ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಪಾದರು, ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು, ಆಶೀರ್ವಚನ ನೀಡಿದರು. ಕಟೀಲಿನ ಲಕ್ಷ್ಮೀನಾರಾಯಣ ಆಸ್ರಣ್ಣ, ಅನಂತ ಪದ್ಮನಾಭ ಆಸ್ರಣ್ಣ, ಶುಭ ಸಂದೇಶ ನೀಡಿದರು. ಕರ್ನಾಟಕ ಧಾರ್ಮಿಕ ಪರಿಷತ್ ಸದಸ್ಯ ಪಂಜ ಭಾಸ್ಕರ ಭಟ್ ನಾಗಾರಾಧನೆ ಕುರಿತು ಉಪನ್ಯಾಸ ನೀಡಿದರು. ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಕೆ. ಅಭಯ ಚಂದ್ರ ಜೈನ್, ಮಾಜಿ ಸಚಿವರಾದ ಅಮರನಾಥ ಶೆಟ್ಟಿ, ಬಿ. ನಾಗರಾಜ ಶೆಟ್ಟಿ, ಮುಂಬೈನ ಉದ್ಯಮಿಗಳಾದ ಮನಮೋಹನ್ ಶೆಟ್ಟಿ, ಐಕಳ ಹರೀಶ್ ಶೆಟ್ಟಿ, ವಿವೇಕ್ ಶೆಟ್ಟಿ,  ಜಯ ಕೃಷ್ಣ ಶೆಟ್ಟಿ, ಪದ್ಮನಾಭ ಎಸ್. ಪೈಯಡೆ, ಸುಭಾಕರ ಹೆಗ್ಡೆ, ಮಹರಾಷ್ಟ್ರ ಪೊಲೀಸ್ ಇಲಾಖೆಯ ಪ್ರಕಾಶ್ ಭಂಡಾರಿ, ಬಿ.ಜೆ.ಪಿ. ನಾಯಕ ಕೆ.ಪಿ. ಜಗದೀಶ್ ಅಧಿಕಾರಿ, ಯುಗಪುರುಷದ ಸಂಪಾದಕ ಕೆ.ಭುವನಾಭಿರಾಮ ಉಡುಪ, ಏಳಿಂಜೆ ದೇವಳದ ಅರ್ಚಕ ಗಣೇಶ್ ಭಟ್, ಕೋಂಜಾಲು ಗುತ್ತುವಿನ ಭಾಸ್ಕರ ಶೆಟ್ಟಿ, ಜಯರಾಮ ಶೆಟ್ಟಿ, ದಿವಾಕರ ಶೆಟ್ಟಿ, ಪ್ರಭಾಕರ ಶೆಟ್ಟಿ, ದಯಾನಂದ ಶೆಟ್ಟಿ, ಶಿವರಾಮ ಶೆಟ್ಟಿ ಮತ್ತಿತರರಿದ್ದರು. ಏಳಿಂಜೆ ಅನಿಲ್ ಶೆಟ್ಟಿ ಸ್ವಾಗತಿಸಿ, ಸಾಯಿನಾಥ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು,
ಬೆಳಗ್ಗಿನಿಂದ ಸಾಂಸ್ಕೃತಿಕ ವೇದಿಕೆಯಲ್ಲಿ ಭಕ್ತಿ ಸಂಗೀತ ರಸಮಂಜರಿ, ಯಕ್ಷನಾದ ವೈಭವ, ಭರತನಾಟ್ಯ, ಮಿಮಿಕ್ರಿ, ಮತ್ತಿತರ ಕಾರ್ಯಕ್ರಮ ನಡೆದವು.

Tuesday, 7 February 2012

ಕೊಡೆತ್ತೂರಿನಲ್ಲಿ ಕೋರ್‍ದಬ್ಬು ದೈವದ ನೇಮ- ಸಂಮಾನ


`ಆದರ್ಶ ಬಳಗ ಕೊಡೆತ್ತೂರು' ಸಾಮಾಜಿಕವಾಗಿ, ಸಾಂಸ್ಕೃತಿಕವಾಗ ತಮ್ಮ ಗುರುತಿಸುವುದರ ಮೂಲಕ ಆದರ್ಶವಾಗಿ ಮುನ್ನಡೆಯುತ್ತಿದೆ' ಎಂದು ಸಾಂಸದ ನಳಿನ್ ಕುಮಾರ್ ಕಟೀಲ್‌ರವರು ಹೇಳಿದರು.
ಅವರು ಕೊಡೆತ್ತೂರು ಶ್ರೀ ಕೋರ್‍ದಬ್ಬು ದೈವದ ವಾರ್ಷಿಕ ನೇಮದ ಸಂದರ್ಭದಲ್ಲಿ ಜರಗಿದ ಆದರ್ಶ ಬಳಗ ಕೊಡೆತ್ತೂರು ಇದರ ವಾರ್ಷಿಕೋತ್ಸವ ಮತ್ತು ಸಂಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಕೊಡೆತ್ತೂರು ಶ್ರೀ ಅರಸು ಕುಂಜರಾಯ ದೈವಸ್ಥಾನದ ಜಯರಾಮ ಮುಕ್ಕಾಲ್ದಿಯವರನ್ನು ಸನ್ಮಾನಿಸಲಾಯಿತು. ಸ್ಥಳೀಯ ಪ್ರತಿಭೆಗಳಾದ ಕ್ರೀಡಾಪಟು ರಿತೇಶ್ ಎಸ್. ಮತ್ತು  ವಿದ್ಯಾರ್ಥಿನಿ ಕು| ಅಶ್ವಿತಾ ಇವರಿಗೆ ಪ್ರತಿಭಾ ಪುರಸ್ಕಾರ ನೀಡಿಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು `ಯುಗಪುರುಷ'ದ ಕೊಡೆತ್ತೂರು ಭುವನಾಭಿರಾಮ ಉಡುಪ ವಹಿಸಿದ್ದರು. ದೇವಸ್ಯ ಮಠ
ಕೊಡೆತ್ತೂರು ಇದರ ಅರ್ಚಕರಾದ ಕೆ. ವೇದವ್ಯಾಸ ಉಡುಪ ಆಶೀವರ್ಚನ ನೀಡಿದರು. ದೇವಸ್ಯ ಕೆ.ವಿ. ಶೆಟ್ಟಿ ಇವರು ಸಂಮಾನಿತರನ್ನು ಅಭಿನಂದಿಸಿದರು.  ವೇದಿಕೆಯಲ್ಲಿ  ಕೊಡೆತ್ತೂರು ಗುತ್ತು ಗುತ್ತಿನಾರ್ ಸಂಜೀವ ಶೆಟ್ಟಿ, ಆದರ್ಶ ಬಳಗದ ಅಧ್ಯಕ್ಷ  ಶಾಂತಾರಾಮ ಕೋಟ್ಯಾನ್ ಉಪಸ್ಥಿತರಿದ್ದರು. ಹರೀಶ್ ಕೊಡೆತ್ತೂರು ಸಂಮಾನ ಪತ್ರ ವಾಚಿಸಿದರು. ದಾಮೋದರ ಶೆಟ್ಟಿ ಸ್ವಾಗತಿಸಿ, ತಾರಾನಾಥ ಶೆಟ್ಟಿ ವಂದಿಸಿದರು.


Monday, 6 February 2012

ಕಿನ್ನಿಗೋಳಿಯ ಯುಗಪುರುಷದಲ್ಲಿ ಅಂತರ್ ಜಿಲ್ಲಾ, ಅಂತರ್ ಶಾಲಾ ನಾಟಕೋತ್ಸವ -2012



 ಮಕ್ಕಳ ಸುಪ್ತ ಪ್ರತಿಭೆ ಪ್ರಕಾಶಕ್ಕೆ ಬರಲು ಇಂತಹ ನಾಟಕೋತ್ಸವ ಪೂರಕವಾಗಿದ್ದು, ವಿದ್ಯಾರ್ಥಿಗಳಿಗೆ ನಾಟಕದ ಕುರಿತು ಆಸಕ್ತಿ ಮೂಡಿಸಬೇಕೆಂದು ಕಟೀಲಿನ ಲಕ್ಷ್ಮೀನಾರಾಯಣ ಆಸ್ರಣ್ಣ ಹೇಳಿದರು.
ಅವರು ಶನಿವಾರ ಯುಗಪುರುಷ ಸಭಾಭವನದಲ್ಲಿ ಉಡುಪಿ, ಕಾಸರಗೋಡು, ದ.ಕ.ಜಿಲ್ಲಾ ಸಹಿತ ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮ ಹಾಗೂ  ಯುಗಪುರುಷ ಕಿನ್ನಿಗೋಳಿ ಇದರ ಸಹಭಾಗಿತ್ವದಲ್ಲಿ ನಡೆದ ಅಂತರ್ ಜಿಲ್ಲಾ, ಅಂತರ್ ಶಾಲಾ ನಾಟಕತ್ಸವ-2012 ನ್ನು ಉದ್ಘಾಟಿಸಿ ಮಾತಾಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಅಧ್ಯಕ್ಷತೆಯನ್ನು ವಹಿಸಿದ್ದು ನಾಟಕಕಾರ ಪ್ರೊ.ಉದ್ಯಾವರ ಮಾಧವ ಆಚಾರ್ಯ, ಕಿನ್ನಿಗೋಳಿ ಪಂಚಾಯತ್ ಅಧ್ಯಕ್ಷ ದೇವಪ್ರಸಾದ್ ಪುನರೂರು, ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷ ಪ್ರೊ.ಅನಂತಪದ್ಮನಾಭ ರಾವ್, ಕಾರ್‍ಯದರ್ಶಿ ಬಿ.ಶ್ರೀನಿವಾಸ ರಾವ್, ಕಾರ್ಯಕಾರಿ ಸಮಿತಿ ಸದಸ್ಯೆ ಸಾವಿತ್ರಿ ಎಸ್.ರಾವ್ ಉಪಸ್ಥಿತರಿದ್ದರು. ಯುಗಪುರುಷದ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪರು ಸ್ವಾಗತಿಸಿ, ಕಾರ್ಯಕಾರಿ ಸಮಿತಿ ಸದಸ್ಯ ಜಯರಾಮ ಪೂಂಜ ಕಾರ್ಯಕ್ರಮ ನಿರೂಪಿಸಿದರು. ಎಂಟು ಶಾಲಾ ಮಕ್ಕಳ ತಂಡದಿಂದ ನಾಟಕಗಳು ನಡೆದವು.