Thursday, 18 October 2012

ಯುಗಪುರುಷ" ದಸರಾ-ದೀಪಾವಳಿ ವಿಶೇಷಾಂಕ ಬಿಡುಗಡೆ



ಕಿನ್ನಿಗೋಳಿ : ಕಳೆದ ೬೬ವರ್ಷಗಳಿಂದ ಕಿನ್ನಿಗೋಳಿಯಂತಹ ಗ್ರಾಮಾಂತರ ಪ್ರದೇಶದಲ್ಲಿ ನಿರಂತರವಾಗಿ ಪ್ರಕಟಗೊಳ್ಳುತ್ತಿರುವ,  ಕರ್ನಾಟಕ ರಾಜ್ಯದ ಮಾಸಪತ್ರಿಕೆಗಳಲ್ಲಿ ಪ್ರಥಮ ಸ್ಥಾನದಲ್ಲಿರುವ, ಸುವರ್ಣ ಕರ್ನಾಟಕ ಏಕೀಕರಣ ಪ್ರಶಸ್ತಿ ಪುರಸ್ಕೃತ "ಯುಗಪುರುಷ" ಕನ್ನಡ ಮಾಸ ಪತ್ರಿಕೆಯ ದಸರಾ-ದೀಪಾವಳಿ ವಿಶೇಷಾಂಕವನ್ನು  ಅಕ್ಟೋಬರ್ ೧೭ರಂದು ಗುರುವಾರ ಶ್ರೀ ಕ್ಷೇತ್ರ ಕಟೀಲಿನಲ್ಲಿ  ಕೆ.ಲಕ್ಷ್ಮೀನಾರಾಯಣ ಆಸ್ರಣ್ಣರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ  ವಾಸುದೇವ ಆಸ್ರಣ್ಣ, ಕಮಲಾದೇವಿ ಪ್ರಸಾದ ಆಸ್ರಣ್ಣ, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಅಜಾರು ನಾಗರಾಜ ರಾಯ, ಗುರುಪುರ ಗೋಳಿದಡಿ ವರ್ಧಮಾನ ದುರ್ಗಾಪ್ರಸಾದ ಶೆಟ್ಟಿ,  ದೇವಪ್ರಸಾದ ಪುನರೂರು, ಯುಗಪುರುಷದ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪರು ಉಪಸ್ಥಿತರಿದ್ದರು.

No comments:

Post a Comment